Tuesday, May 21, 2024
spot_imgspot_img
spot_imgspot_img

ಭೀಕರ ಅಪಘಾತದಲ್ಲಿ ಅಸುನೀಗಿದ ನವ ದಂಪತಿ..!

- Advertisement -G L Acharya panikkar
- Advertisement -

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರಿನ ಚಿಕ್ಕನಾಯಕನಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ದುರ್ಘಟನೆ ನಡೆದಿದೆ. ರಘು (35), ಅನುಷಾ (28) ಮೃತ ದುರ್ದೈವಿಗಳು.

ಎರಡು ತಿಂಗಳ ಹಿಂದಷ್ಟೇ ರಘು ಮತ್ತು ಅನುಷಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ನವ ದಂಪತಿ ತುಮಕೂರಿನಿಂದ ಬಳ್ಳಾರಿಗೆ ಮದುವೆಯ ಸಮಾರಂಭಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕನಾಯಕನಹಳ್ಳಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!