Thursday, April 18, 2024
spot_imgspot_img
spot_imgspot_img

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ

- Advertisement -G L Acharya panikkar
- Advertisement -

ಹಾಸನ : ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಾರೇಹಳ್ಳಿ‌ಯ ನುಗ್ಗೇಹಳ್ಳಿ- ತಿಪಟೂರು ರಸ್ತೆಯಲ್ಲಿ ನಡದಿದೆ. ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಪತಿ- ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಲೋಕೇಶ್‌ ಚಾರಿ (ಯೋಗೀಶ್), ಲಕ್ಷ್ಮಿ ಹಾಗೂ ಲೋಕೇಶ್‌ ಚಾರಿ ಅವರ ತಂಗಿಯ ಮಕ್ಕಳಾದ ಗಾನವಿ ಮತ್ತು ಲೇಖನ ‌ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬೈಕ್‌ ಸಂಪೂರ್ಣ ನಜ್ಜುಗುಜ್ಜಾಗಿದೆ. ಲೋಕೇಶ್‌ ಅವರು ಹೊಸೂರಿನಿಂದ‌ ಪತ್ನಿಯನ್ನು ಕರೆದುಕೊಂಡು ನವಿಲೆ ಗ್ರಾಮಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ‌ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನುಗ್ಗೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!