Wednesday, May 1, 2024
spot_imgspot_img
spot_imgspot_img

ಮಂಗಳೂರಿನಲ್ಲಿ ಲಘು ಭೂಕಂಪನದ ಅನುಭವ; ಶಾಲೆಯಿಂದ ಹೊರಗೆ ಓಡಿ ಬಂದ ಮಕ್ಕಳು

- Advertisement -G L Acharya panikkar
- Advertisement -

ಮಂಗಳೂರು : ಭಾರೀ ಮಳೆಯಿಂದಾಗಿ ತತ್ತರಿಸಿರುವ ಮಂಗಳೂರಿನ ಜನತೆಗೆ ಇದೀಗ ಭೂಮಿ ಕಂಪಿಸಿದ ಅನುಭವವಾಗಿದ್ದು, ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ.

ಮಂಗಳೂರಿನ ಮೇರಿಹಿಲ್ ಭಾಗದಲ್ಲಿ ಇಂದು ಬೆಳಗ್ಗೆ 10.15 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮೌಂಟ್ ಕಾರ್ಮೆಲ್ ಶಾಲಾ ವಿದ್ಯಾರ್ಥಿಗಳು ಹಾಗೂ ವಸತಿ ಸಮುಚ್ಚಯದ ನಿವಾಸಿಗಳು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಗಳಲ್ಲಿ ಭೂಕಂಪನದ ಅನುಭವವಾಗುತ್ತಿತ್ತು. ಇದೀಗ ಮಂಗಳೂರು ನಗರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.

vtv vitla
- Advertisement -

Related news

error: Content is protected !!