- Advertisement -
- Advertisement -
ಉತ್ತರ ಕನ್ನಡ: ಯಲ್ಲಾಪುರ ತಾಲೂಕಿನ ಆರೆಬೈಲ್ ಕ್ರಾಸ್ನ ಇಡಗುಂದಿ ಸಮೀಪ ಕೆಮಿಕಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ನಡೆದಿದೆ. ಸುಮಾರು ದೂರದವರೆಗೂ ಬೆಂಕಿ ಆವರಿಸಿದ ಹಿನ್ನಲೆ ಹುಬ್ಬಳ್ಳಿ-ಅಂಕೋಲ ರಾಷ್ಟ್ರೀಯ ಹೆದ್ದಾರಿ 66ರ ಸಂಚಾರವನ್ನು ಕೆಲಕಾಲ ಬಂದ್ ಮಾಡಲಾಗಿತ್ತು, ಇದೀಗ ಸಂಚಾರ ಮುಕ್ತವಾಗಿದೆ.
ಮಂಗಳೂರಿನಿಂದ ಗುಜರಾತಿಗೆ ತೆರಳಿತ್ತಿದ್ದ ಟ್ಯಾಂಕರ್ನಲ್ಲಿ ಅರಬೈಲ್ ಘಟ್ಟದಲ್ಲಿ ಹೋಗುವಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಲಾರಿ ಹೊತ್ತಿ ಉರಿಯಲಾರಂಭಿಸಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಫೋಟದಿಂದ 500 ಮೀಟರ್ ಹೆಚ್ಚು ದೂರು ಬೆಂಕಿ ಅಲ್ಲಲ್ಲಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಡಬೇಕಾಯಿತು.
ಯಲ್ಲಾಪುರದ ಇಡಗುಂದಿ ಬಳಿ ಪಲ್ಟಿಯಾಗಿ ಬಿದ್ದಿರುವ ಕೆಮಿಕಲ್ ಟ್ಯಾಂಕರ್ ನಿಂದ ಹೊರಕ್ಕೆ ಬಿದ್ದು ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ.
- Advertisement -