Saturday, April 27, 2024
spot_imgspot_img
spot_imgspot_img

ಮಂಗಳೂರು: ಅಪ್ರಾಪ್ತೆಯ ಮೃತದೇಹ ಚರಂಡಿಯಲ್ಲಿ ಪತ್ತೆ; ಅತ್ಯಾಚಾರ ಶಂಕೆ!

- Advertisement -G L Acharya panikkar
- Advertisement -
vtv vitla
vtv vitla
vtv vitla

ಮಂಗಳೂರು: ನಗರ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಹತ್ಯೆ ಮಾಡಿದ ಪಾಪಿಗಳು ಚರಂಡಿಯಲ್ಲಿ ಮೃತದೇಹ ಎಸೆದ ಅಮಾನವೀಯ ಘಟನೆ ನ 21ರ ರವಿವಾರ ಸಂಜೆ ವೇಳೆ ಬೆಳಕಿಗೆ ಬಂದಿದೆ.

ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ಇದಾಗಿದ್ದು, ಸಂಜೆ ನಾಲ್ಕು ಗಂಟೆಯಿಂದ ಬಾಲಕಿ ನಾಪತ್ತೆಯಾಗಿದ್ದಳು. ಬಳಿಕ ಬಾಲಕಿಗಾಗಿ ಕಾರ್ಖಾನೆ ಸೇರಿದಂತೆ ಹಲವೆಡೆ ಶೋಧ ಕಾರ್ಯ ನಡೆಸಲಾಗಿದೆ. ಕಾರ್ಖಾನೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಬಾಲಕಿ ಪತ್ತೆಯಾಗಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರು ಅದಗಲೇ ಬಾಲಕಿ ಸಾವನ್ನಪ್ಪಿದ್ದಳು.

ಇನ್ನು ಬಾಲಕಿಯನ್ನು ಕಾರ್ಖಾನೆಯಲ್ಲಿ ಕಾರ್ಮಿಕರಾಗಿದ್ದವರೇ ಹತ್ಯೆ ಮಾಡಿರುವ ಶಂಕೆಯನ್ನು ಆಕೆಯ ಪೋಷಕರು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಈಗಾಗಲೇ ಹಲವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

vtv vitla
- Advertisement -

Related news

error: Content is protected !!