Friday, June 27, 2025
spot_imgspot_img
spot_imgspot_img

ಮಂಗಳೂರು: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದವನ ಮೇಲೆ ಹಲ್ಲೆ ಪ್ರಕರಣ; ಮೂವರು ಅರೆಸ್ಟ್‌ – ದಾವೂದ್ ವಿರುದ್ಧವೂ ಪೊಕ್ಸೊ ಪ್ರಕರಣ ದಾಖಲು

- Advertisement -
- Advertisement -

ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೆರೆಕಾಡು ಕೆಂಚನಕೆರೆ ನಿವಾಸಿಗಳಾದ ದಿವ್ಯೇಶ್ ದೇವಾಡಿಗ(38), ರಾಜೇಶ್ ಹಾಗೂ ಯೋಗೇಶ್ ಕುಮಾರ್(46) ಬಂಧಿತ ಆರೋಪಿಗಳು. ಈ ನಡುವೆ ಹಲ್ಲೆಗೊಳಗಾದ ಹಳೆಯಂಗಡಿ ಇಂದಿರಾ ನಗರ ನಿವಾಸಿ ದಾವೂದ್ ಹಕೀಂ(33) ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದ್ದು, ಆತನನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಶನಿವಾರ ದಾವೂದ್ ಹಕೀಂನಿಗೆ ಕೆರೆಕಾಡು ಗಣೇಶ ಕಟ್ಟೆ ಬಳಿ ತಂಡವೊಂದು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿತ್ತು. ಬಳಿಕ ಆತನನ್ನು ಪೊಲೀಸರು ಮುಲ್ಕಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

ಈ ನಡುವೆ ಹಲ್ಲೆಗೊಳಗಾದ ದಾವೂದ್ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿತ್ತು. ಹಲ್ಲೆ ಆರೋಪಿಗಳ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಗಳ ಬಂಧನವಾಗಿದೆ.

- Advertisement -

Related news

error: Content is protected !!