- Advertisement -
- Advertisement -
ಮಂಗಳೂರು: ಇಲ್ಲಿನ ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಆರೋಪಿಗಳನ್ನು 4 ದಿನಗಳ ಪೊಲೀಸ್ ಕಸ್ಟಡಿಯಲ್ಲಿರಿಸಿದೆ.
ಬಂಧಿತ ಆರೋಪಿಗಳು ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಜಾಯ್ಬನ್ ಸಿಂಗ್ (21), ಮುಖೇಶ್ ಸಿಂಗ್ (20), ಜಾರ್ಖಂಡ್ ನ ರಾಂಚಿಯ ಮನೀಶ್ ತಿರ್ಕಿ (33 ) ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಮುನೀಂ ಸಿಂಗ್ ( 20) ಎನ್ನಲಾಗಿದೆ.
ಘಟನೆಯ ವಿವರ:
ನ.21 ರಂದು ಆಟವಾಡುತ್ತಿದ್ದ 8 ವರ್ಷದ ಬಾಲಕಿಯನ್ನು ಹಾಡಹಗಲೇ ಎಳೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ರು, ಪ್ರಕರಣ ಬಯಲಾಗುವ ಭಯಲಾಗುವ ಭೀತಿಯಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ ಚರಂಡಿಯಲ್ಲಿ ಎಸೆದುಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಆರೋಪಿಗಳನ್ನು 4 ದಿನಗಳ ಪೊಲೀಸ್ ಕಸ್ಟಡಿಗೆಯಲ್ಲಿರಿಸಿದೆ.
- Advertisement -