Tuesday, May 7, 2024
spot_imgspot_img
spot_imgspot_img

ಮಂಗಳೂರು: ಆಕಸ್ಮಿಕವಾಗಿ ಮೇಲ್ಛಾವಣಿಯಿಂದ ಬಿದ್ದು ಯುವಕ ಮೃತ್ಯು

- Advertisement -G L Acharya panikkar
- Advertisement -

ಮಂಗಳೂರು: ಆಕಸ್ಮಿಕವಾಗಿ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಸಂಭವಿಸಿದೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅವಘಡ ಸಂಭವಿಸಿದೆ. ಎಕ್ಕೂರುಗುಡ್ಡೆ ನಿವಾಸಿ ವರುಣ್‌(25) ಮೃತಪಟ್ಟ ದುರ್ದೈವಿ.

ವರುಣ್‌ ವರ್ಕ್‌ಶಾಪ್‌ನ ಮೇಲ್ಛಾವಣಿಯ ಶೀಟ್‌ ಮೇಲೆ ಸೋಲಾರ್‌ ಪ್ಯಾನಲ್‌ಗೆ ವಯರಿಂಗ್‌ ಮತ್ತು ಪ್ಲಂಬಿಂಗ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್‌ ತುಂಡಾಗಿ ವರುಣ್‌ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ. ಸೂಕ್ತ ಸುರಕ್ಷತೆ ವಹಿಸಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರ ವಿರುದ್ಧ ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿದೆ.

ವರುಣ್‌ ಅವರು ತಾಯಿ ಮತ್ತು ಇಬ್ಬರು ತಮ್ಮಂದಿರೊಂದಿಗೆ ವಾಸವಾಗಿದ್ದರು. ಓರ್ವ ತಮ್ಮ ಬೇಕರಿ ಕೆಲಸಕ್ಕೆ ಹೋಗುತ್ತಿದ್ದು ಇನ್ನೋರ್ವ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವರುಣ್‌ ಬಿಜೆಪಿಯ ಎಕ್ಕೂರು ಬೂತ್‌ ಕಾರ್ಯದರ್ಶಿಯಾಗಿಯೂ ಕ್ರಿಯಾಶೀಲರಾಗಿದ್ದರು.

- Advertisement -

Related news

error: Content is protected !!