ಮಂಗಳೂರು: ನಗರದ ಬಳ್ಳಾಲ್ಬಾಗ್ ಪ್ರದೇಶದಲ್ಲಿ ನಿನ್ನೆ ತಡರಾತ್ರಿ 11.45ಕ್ಕೆ ಎರಡು ತಂಡಗಳ ಮಧ್ಯೆ ಮಾರಾಮಾರಿ ನಡೆದಿದೆ. ಬಿಡಿಸಲುಹೋದ ಮಹಿಳಾಪೊಲೀಸ್ ಅಧಿಕಾರಿಯನ್ನು ತಳ್ಳಿ, ವಾಕಿಟಾಕಿ ಕಿತ್ತೆಸೆದು ಹಲ್ಲೆ ಮಾಡಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬ0ಧಿಸಿದ0ತೆ ಏಳುಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗನ್ನು ಧೀರಜ್ ಶೆಟ್ಟಿ, ರಕ್ಷಿತ್. ಕೆ, ರೋಹಿತ್ ಶೆಟ್ಟಿ, ಹರ್ಷಿತ್, ಕೀರ್ತಿರಾಜ್, ವಿವೇಕ್, ರಾಹುಲ್ ಎನ್ನಲಾಗಿದೆ. ನಿನ್ನೆ ತಡರಾತ್ರಿ 11.45ರ ಸುಮಾರಿಗೆ ಎರಡು ತಂಡಗಳ ಮಧ್ಯೆ ಬಳ್ಳಾಲ್ಬಾಗ್ ಬಳಿ ರಸ್ತೆಯಲ್ಲಿ ಮಾರಕಾಯುಧಗಳನ್ನು ಹಿಡಿದು ಮಾರಾಮಾರಿ ನಡೆದಿತ್ತು. ತಕ್ಷಣ ಸ್ಥಳಕ್ಕೆ ಬರ್ಕೆ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಅಧಿಕಾರಿ ಧಾವಿಸಿ ತಡೆಯಲು ಯತ್ನಿಸಿದಾಗ ಆರೋಪಿ ಧೀರಜ್ ಎಂಬಾತ ಅವರನ್ನು ತಳ್ಳಿ, ಅವರ ಕೈಯ್ಯಲ್ಲಿದ್ದ ವಾಕಿಟಾಕಿಯನ್ನು ಕಿತ್ತೆಸೆದಿದ್ದು, ಉಳಿದ ಆರೋಪಿಗಳು ಅವರು ಮುಂದೆ ಹೋಗದಂತೆ ತಡೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂದರ್ಭ ಹೆಚ್ಚಿನ ಪೊಲೀಸರು ಬರುತ್ತಿದ್ದಂತೆ ಕೆಲ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದು, ಪೊಲೀಸರು ಸ್ಥಳದಲ್ಲಿದ್ದ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮಾರಾಮಾರಿಯಲ್ಲಿ ಸ್ಥಳದಲ್ಲಿದ್ದ ಒಂದು ಚತುಷ್ಕಕ್ರ ವಾಹನಸೇರಿ, ಆರು ದ್ವಿಚಕ್ರ ವಾಹನಗಳು ಜಖಂಗೊ0ಡಿವೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.