ಮಂಗಳೂರು: 13 ವರ್ಷದ ಬಾಲಕಿಗೆಯೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸ್ನೇಹ ದುರ್ಬಳಕೆ ಮಾಡಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಮಂಗಳೂರು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕಾವೂರು ಮರಕಡ ನಿವಾಸಿ ,ಬಸ್ಸ್ ಚಾಲಕನಾದ ದಯಾನಂದ ದಾನಣ್ಣವರ್ ಅಲಿಯಾಸ್ ದಯಾನಂದ (30) ಎಂಬಾತ ಬಂಧಿತ ಆರೋಪಿ.
ಬಾಲಕಿಯೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸ್ನೇಹ ಬೆಳೆಸಿ ಪರಸ್ಪರ ಚಾಟ್ ಮಾಡುತ್ತಿದ್ದು, ಹಲವು ದಿನಗಳಿಂದ ಅವಳಿಗೆ ಕರೆ ಮಾಡಿ ತನ್ನೊಂದಿಗೆ ಮಿಟ್ ಆಗುವಂತೆ ಹೇಳಿದ್ದಾನೆ. ಆದರೆ, ಬಾಲಕಿ ನಿರಾಕರಿಸಿದ್ದು, ಮರುದಿನ ಅವಳನ್ನು ಒಪ್ಪಿಸಿ ಆಟೋರಿಕ್ಷಾದಲ್ಲಿ ಹಂಪನಕಟ್ಟೆಯ ಲಾಡ್ಜ್ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಅವಳನ್ನು ಅವಳ ಮನೆಯ ಬಳಿ ಕರೆತಂದು ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ ಎಂದು ತಿಳಿದು ಬಂದಿದೆ.
ಘಟನೆ ತಿಳಿದ ಬಾಲಕಿಯ ಪೋಷಕರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟರಮಣ ಸ್ವಾಮಿ ಬಾಲಕಿ ಪರವಾಗಿ ವಾದಿಸಿದ್ದಾರೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಪೋಕ್ಸೊ ನ್ಯಾಯಾಧೀಶ ಕೆ. ಎಂ.ರಾಧಾಕೃಷ್ಣ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.