- Advertisement -
- Advertisement -
ಮಂಗಳೂರು: ಉಕ್ರೇನ್ ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ನಗರದ ಬಿಜೈ ನಿವಾಸಿ ಅನುಷಾ ಭಟ್, ಗುರುವಾರ ಸುರಕ್ಷಿತವಾಗಿ ನಗರಕ್ಕೆ ಬಂದಿಳಿದಿದ್ದಾರೆ.
ಉಕ್ರೇನ್ ಸೈನಿಕರು ನಮ್ಮನ್ನು ಗಡಿಯವರೆಗೆ ಬಿಟ್ಟು ಬಂದರು. ನಂತರ ನಾವು ರೊಮೇನಿಯಾಕ್ಕೆ ತೆರಳಿ ಅಲ್ಲಿನ ಆಶ್ರಯ ಕೇಂದ್ರದಲ್ಲಿ ಉಳಿದುಕೊಂಡಿದ್ದೆವು. ರೊಮೇನಿಯಾದಿಂದ ಭಾರತೀಯ ಅಧಿಕಾರಿಗಳು ಮುಂಬೈಗೆ ವಿಮಾನ ವ್ಯವಸ್ಥೆ ಮಾಡಿದ್ದು, ಇದೀಗ ಮುಂಬೈನಿಂದ ಇಲ್ಲಿಗೆ ಬಂದಿದ್ದೇನೆ ಎಂದು ಅನುಷಾ ತಿಳಿಸಿದ್ದಾರೆ.
ತಂದೆ ಹರೀಶ್ಚಂದ್ರ ಭಟ್ ಹಾಗೂ ತಾಯಿ ವಿದ್ಯಾ ಭಟ್ ಅವರು ವಿಮಾನ ನಿಲ್ದಾಣಕ್ಕೆ ಬಂದು ಮಗಳನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ವಿಮಾನ ನಿಲ್ದಾಣದಲ್ಲಿ ಅನುಷಾ ಅವರನ್ನು ಸ್ವಾಗತಿಸಿದರು.
- Advertisement -