- Advertisement -
- Advertisement -
ಮಂಗಳೂರು: ಕೇಂದ್ರ ಗೃಹ ಸಚಿವಾಲಯವು ವಿಶೇಷ ಕಾರ್ಯಾಚರಣೆಗಾಗಿ ನೀಡುವ ಪುರಸ್ಕಾರ ಮಂಗಳೂರಿನ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ರವರಿಗೆ ಲಭಿಸಿದ್ದು, ಉಗ್ರರ ವಿರುದ್ಧದ ಕಾರ್ಯಾಚರಣೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.
ಉಡುಪಿ ಜಿಲ್ಲೆ ಚೇರ್ಕಾಡಿ ನಿವಾಸಿ ಮಹೇಶ್ ಪ್ರಸಾದ್ ಅವರು ಮೂಡುಬಿದಿರೆ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿ. ಕಾರವಾರ, ಪುತ್ತೂರು, ಮಣಿಪಾಲ, ಕಾಪು ಪೊಲೀಸ್ ಠಾಣೆಗಳಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿ ಕಳೆದ 1 ವರ್ಷದಿಂದ ಮಂಗಳೂರು ಸಿಸಿಬಿಯಲ್ಲಿದ್ದಾರೆ. ಕೆಲವು ತಿಂಗಳ ಹಿಂದೆ ಐಸಿಸ್ ವಿರುದ್ಧ ಕಾರ್ಯಾಚರಣೆಗಾಗಿ ಈ ಪುರಸ್ಕಾರ ಬಂದಿದೆ.
- Advertisement -