Wednesday, May 15, 2024
spot_imgspot_img
spot_imgspot_img

ಮಂಗಳೂರು: ಉಪ್ಪಿನಂಗಡಿ ಲಾಠಿಚಾರ್ಜ್ ಖಂಡಿಸಿ ಕ್ಲಾಕ್ ಟವರ್ ಬಳಿ PFI ಪ್ರತಿಭಟನೆ; ಪ್ರತಿಭಟನಾಕಾರರ ಮನವಿ ಸ್ವೀಕರಿಸಿದ SP ಕ್ರಮ ಕೈಗೊಳ್ಳುವ ಭರವಸೆ!

- Advertisement -G L Acharya panikkar
- Advertisement -
vtv vitla
vtv vitla

ಮಂಗಳೂರು: ಉಪ್ಪಿನಂಗಡಿಯಲ್ಲಿ ನಡೆದ ಲಾಠಿಚಾರ್ಜ್ ಖಂಡಿಸಿ ಶುಕ್ರವಾರ ಮಂಗಳೂರಿನ ಕ್ಲಾಕ್ ಟವರ್‌ ಬಳಿ ಪಿಎಫ್ಐ ಕಾರ್ಯಕರ್ತರ ಪ್ರತಿಭಟನೆ ನಡೆಯಿತು.

ಈ ಪ್ರತಿಭಟನಾ ಸಭೆಗೆ ಖುದ್ದು ಎಸ್. ಪಿ ಖುಷಿಕೇಶ್ ಸೋನಾವಣೆ ಭೇಟಿ ನೀಡಿ ಪ್ರತಿಭಟನಾಕಾರರ ಬೇಡಿಕೆಗೆ ಒಪ್ಪಿದ್ದಾರೆ.

vtv vitla

ಉಪ್ಪಿನಂಗಡಿಯಲ್ಲಿ ನಡೆದ ಲಾರಿಚಾರ್ಜ್‌ನಲ್ಲಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಬೇಕು. ಜೊತೆಗೆ ಘಟನೆಯ ಸತ್ಯಾಸತ್ಯತೆಯನ್ನು ಸಾರ್ವಜನಿಕರ ಮುಂದಿಡಬೇಕು. ಅಮಾಯಕರ ಮೇಲಿನ ಕೇಸ್ ಹಿಂಪಡೆಯಬೇಕು ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಬೇಕು ಎಂದು ಬೇಡಿಕೆ ಸಲ್ಲಿಸಿದರು.

ಈ ವೇಳೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್‌ ಭೇಟಿ ನೀಡಿ ಎಸ್‌ಪಿ ಸ್ಥಳಕ್ಕೆ ಬರುತ್ತಾರೆಂಬ ಭರವಸೆ ನೀಡಿದರು. ನಂತರ ಸ್ಥಳಕ್ಕೆ ಬಂದ ಎಸ್‌ಪಿ ಪ್ರತಿಭಟನಕಾರರ ಬೇಡಿಕೆ ಆಲಿಸಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

vtv vitla
vtv vitla
vtv vitla
- Advertisement -

Related news

error: Content is protected !!