Thursday, April 25, 2024
spot_imgspot_img
spot_imgspot_img

ಮಂಗಳೂರು: ಎನ್ಐಟಿಕೆ ಟೋಲ್ ಗೇಟ್ ವಿರುದ್ಧ ವಿನೂತನ ಪ್ರತಿಭಟನೆ.!

- Advertisement -G L Acharya panikkar
- Advertisement -

ಮಂಗಳೂರು: ಸುರತ್ಕಲ್‌ನ ಎನ್‌ಐಟಿಕೆ ಬಳಿ ಕಾರ್ಯನಿರ್ವಹಿಸುತ್ತಿರುವ ಟೋಲ್‌ಗೇಟ್‌ ತೆರವಿಗೆ ಆಗ್ರಹಿಸಿ ಆಸಿಫ್ ಆಪತ್ಬಾಂಧವ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಐದನೇ ದಿನದ 24 ಗಂಟೆಯೂ ಯಾವುದೇ ವಿರಾಮವಿಲ್ಲದೆ ಪ್ರತಿಭಟನೆ ನಡೆಯುತ್ತಿದೆ.

ಟೋಲ್‌ಗೇಟ್ ಮುಚ್ಚುವವರೆಗೂ ಪ್ರತಿಭಟನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಸೋಮವಾರದಿಂದಲೇ ನಡೆಯುತ್ತಿರುವ ಪ್ರತಿಭಟನೆಗೆ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರಿಂದ ಬೆಂಬಲ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಟೋಲ್‌ಗೇಟ್ ಮುಚ್ಚುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಮತ್ತಷ್ಟು ಸಾಹಸಗಳನ್ನು ಕೈಗೊಳ್ಳುವುದಾಗಿ ಆಸಿಫ್ ತಿಳಿಸಿದ್ದಾರೆ.

ಪ್ರತಿಭಟನೆಯ ನಡುವೆ ವಿಶೇಷವಾಗಿ ಶವಸಂಸ್ಕಾರ ಮಾಡುವ ರೀತಿಯಲ್ಲಿ ಶವದ ಬಟ್ಟೆ ತೊಟ್ಟು ಧರಣಿ ವೇದಿಕೆಯ ಮುಂದೆ ನಿರ್ಜೀವದಂತೆ ಮಲಗಿ ವಿನೂತನವಾಗಿ ಪ್ರತಿಭಟಿಸುತ್ತ ಸಾರ್ವಜನಿಕರ ಗಮನ ಸೆಳೆದರು. ಗುಂಡಿಯಲ್ಲಿ ನೀರು ತುಂಬಿಸಿ, ಕೆಸರುಗದ್ದೆಯಲ್ಲಿ ಕುಣಿದು ಕುಪ್ಪಳಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

- Advertisement -

Related news

error: Content is protected !!