- Advertisement -
- Advertisement -
ಮಂಗಳೂರು: ಎರಡು ಎಕ್ಸ್ಪ್ರೆಸ್ ಬಸ್ಸ್ ಹಾಗೂ ಒಂದು ಗೂಡ್ಸ್ ಲಾರಿಯ ನಡುವೆ ಸರಣಿ ಅಪಘಾತ ಸಂಭವಿಸಿ ಎಲ್ಲರೂ ಪ್ರಾಣಾಪಾಯದಿಂದ ಪಾರಾದ ಘಟನೆ ಮಂಗಳೂರು ಹೊರವಲಯದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66 ರ ಪಡುಪಣಂಬೂರು ಮುಖ್ಯ ಜಂಕ್ಷನ್ನಲ್ಲಿ ನಡೆದಿದೆ.
ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಎಕ್ಸ್ಪ್ರೆಸ್ ಬಸ್ಸೊಂದು ಹಠಾತ್ತನೆ ಬ್ರೇಕ್ ಹಾಕಿದ್ದರಿಂದ ಅದರ ಹಿಂದೆ ಇದ್ದ ಗೂಡ್ಸ್ ತುಂಬಿದ ಲಾರಿ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಮತ್ತೊಂದು ಎಕ್ಸ್ಪ್ರೆಸ್ ಬಸ್ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯಲ್ಲಿಯೂ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಒಂದು ಬಸ್ಸಿನ ಗಾಜು ಪುಡಿ ಪುಡಿಯಾಗಿದೆ. ಗೂಡ್ಸ್ ಲಾರಿಯ ಮುಂಭಾಗ ಜಖಂ ಆಗಿದ್ದು ಉತ್ತರ ವಲಯ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರಯಾಣಿಕರು ಅದೇ ರಸ್ತೆಯಲ್ಲಿ ಸಂಚರಿಸುವ ಎಕ್ಸ್ಪ್ರೆಸ್ ಬಸ್ಸಿನಲ್ಲಿ ಪ್ರಯಾಣವನ್ನು ಮುಂದುವರಿಸಿದ್ದಾರೆ.
- Advertisement -