- Advertisement -
- Advertisement -
ಮಂಗಳೂರು: ಮುಲ್ಕಿಯ ಮುಸ್ಲಿಂ ವ್ಯಕ್ತಿಯಿಂದ ಹಿಂದೂ ಯುವತಿಯನ್ನು ಪುಸಲಾಯಿಸಿ ಬಲೆಗೆ ಬಿಳಿಸಿಕೊಂಡಿದ್ದಾನೆ. ಇದು ಲವ್ ಜಿಹಾದ್ ಎಂದು ಆರೋಪಿಸಿ ಆತನನ್ನು ಪೋಲಿಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಲವ್ ಜಿಹಾದ್ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿಯೋರ್ವನಿಗೆ ಹಿಂದೂ ಕಾರ್ಯಕರ್ತರು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರು ನಗರದ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸುರತ್ಕಲ್ ಮೂಲದ ತೋಕೂರು ಬಳಿಯ ಬಾಡಿಗೆ ಮನೆ ನಿವಾಸಿ ಸಮೀರ್ ಬಂಧಿತ ಆರೋಪಿ ಯಾಗಿದ್ದಾನೆ.
ಸಮೀರ್ಗೆ ಈಗಾಗಲೇ ವಿವಾಹವಾಗಿದ್ದು. ಆದರೆ ಹಿಂದೂ ಯುವತಿ ಸವಿತಾ ಎಂಬಾಕೆಯನ್ನು ಪುಸಲಾಯಿಸಿ ತೋಕೂರಿನಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಾನೆ ಎಂದು ಮಾಹಿತಿ ಲಭ್ಯವಾದಂತೆ ಹಿಂದೂ ಕಾರ್ಯಕರ್ತರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಆತ ಲವ್ ಜಿಹಾದ್ ಮಾಡಿದ್ದಾನೆಂದು ಆರೋಪಿಸಿ ಧರ್ಮದೇಟು ನೀಡಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
- Advertisement -