Monday, May 6, 2024
spot_imgspot_img
spot_imgspot_img

ಮಂಗಳೂರು: ಕಾಂಗ್ರೆಸ್‌ ಮುಖಂಡ, ಉದ್ಯಮಿಯ ಮನೆ, ಕಛೇರಿಗೆ ಐಟಿ ದಾಳಿ

- Advertisement -G L Acharya panikkar
- Advertisement -

ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿ ಅವರ ನಗರದ ಮನೆ ಮತ್ತು ಕಚೇರಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಆಗಿರುವ ವಿವೇಕ್ ರಾಜ್, ಅವರ ಮನೆಗೆ 2 ಕಾರಿನಲ್ಲಿ ಬಂದಿರುವ 8 ಮಂದಿ ಅಧಿಕಾರಿಗಳ ತಂಡ ವಿವೇಕ್ ರಾಜ್ ಅವರ ನಿವಾಸ ಹಾಗೂ ಕಚೇರಿಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ವಿವೇಕ್ ರಾಜ್ ಪೂಜಾರಿ ಅವರು, ನನ್ನ ವ್ಯವಹಾರದ ದಾಖಲೆಪತ್ರಗಳು ಸಮರ್ಪಕವಾಗಿದೆ. ನಾನು ತೆರಿಗೆ ವಂಚಿಸಿ ವ್ಯವಹರಿಸುವುದಿಲ್ಲ. ಇದು ಬಿಜೆಪಿಗರ ಕುಮ್ಮಕ್ಕಿನಿಂದ ಐಟಿ ದಾಳಿ‌ ನಡೆದಿದೆ ಎಂದು ಆರೋಪಿಸಿದ್ದಾರೆ.

- Advertisement -

Related news

error: Content is protected !!