- Advertisement -
- Advertisement -
ಮಂಗಳೂರು: ಇಲ್ಲಿನ ಅತ್ತಾವರ ಸಮೀಪದ ನಂದಿಗುಡ್ದೆಯ ಕೊರಗಜ್ಜನ ಕಟ್ಟೆಗೆ ಬಳಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳಿಗೆ ಅಪರಾಧಿಗಳನ್ನು ತಕ್ಷಣ ಬಂಧಿಸಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಮುಖರು ಆಗ್ರಹಿಸಿದ್ದಾರೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಠಿಣ ಕ್ರಮ ಜರಗಿಸಲು ಶಾಸಕ ವೇದವ್ಯಾಸ್ ಕಾಮತ್ ಆಗ್ರಹ:
ಶ್ರೀ ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಯನ್ನು ಅಪವಿತ್ರಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಜರಗಿಸಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ವಿಚಾರದ ಕುರಿತು ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುವ ಯಾರೇ ಆದರೂ ಕಠಿಣ ಕ್ರಮ ಜರಗಿಸಲಾಗುತ್ತದೆ.
ಶಾಂತಿಯುತವಾಗಿರುವ ಕರಾವಳಿಯನ್ನು ಇಂತಹ ಕೃತ್ಯಗಳ ಮೂಲಕ ಕೋಮುಗಲಭೆಗೆ ಪ್ರಚೋದಿಸುವ ಶಕ್ತಿಗಳನ್ನು ಹೆಡೆಮುರಿ ಕಟ್ಟಲು ಪೋಲಿಸ್ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
- Advertisement -