Tuesday, May 7, 2024
spot_imgspot_img
spot_imgspot_img

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಪತ್ತೆಗೆ ಶೋಧ ಕಾರ್ಯ, ಶೀಘ್ರ ಬಂಧನ – ಪೊಲೀಸ್ ಆಯುಕ್ತರು

- Advertisement -G L Acharya panikkar
- Advertisement -

vtv vitla

ಮಂಗಳೂರು: ನಗರದ ಕಾನೂನು ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಪತ್ತೆಗೆ ಶೋಧ ಕಾರ್ಯ ಮುಂದುವರಿಸಲಾಗಿದ್ದು, ಶೀಘ್ರ ಬಂಧನವಾಗಲಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ತಿಳಿಸಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಆರೋಪಿ ವಿರುದ್ದ ಲುಕ್ ಔಟ್ ನೋಟೀಸ್ ಹೊರಡಿಸಲಾಗಿದೆ. ಬ್ಯಾಂಕ್ ಖಾತೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಆರೋಪಿಯ ಕೃತ್ಯಕ್ಕೆ ಸಹಕಾರ ನೀಡಿದ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣ ಗಂಭೀರವಾಗಿರುವುದರಿ0ದ ಆರೋಪಿಗೆ ನಿರೀಕ್ಷಣ ಜಾಮೀನು ನೀಡಬಾರದು ಎಂದು ನ್ಯಾಯಾಲಯಕ್ಕೆ ಕೇಳಿಕೊಳ್ಳಲಾಗಿತ್ತು. ನ್ಯಾಯಾಲಯ ನಿರೀಕ್ಷಣ ಜಾಮೀನು ತಿರಸ್ಕರಿಸಿದೆ. ಹೀಗಾಗಿ ಆರೋಪಿಯನ್ನು ಶೀಘ್ರ ಬಂಧಿಸುವುದಾಗಿ ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!