Friday, April 26, 2024
spot_imgspot_img
spot_imgspot_img

ಮಂಗಳೂರು: ಕಾರು-ಬೈಕ್ ನಡುವೆ ಡಿಕ್ಕಿ; ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಲಾರಿ ಹರಿದು ದಾರುಣ ಸಾವು!

- Advertisement -G L Acharya panikkar
- Advertisement -

ಮಂಗಳೂರು: ಕಾರು-ಬೈಕ್ ನಡುವೆ ಅಪಘಾತ ಸಂಭವಿಸಿ ರಸ್ತೆಗೆ ಎಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಲಾರಿಯೊಂದು ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕರಂಬಾರು ಮಸೀದಿ ಬಳಿ ಸಂಭವಿಸಿದೆ.

ಮೃತವ್ಯಕ್ತಿ ಮಂಗಳೂರಿನ ಕದ್ರಿ ನಿವಾಸಿ ಸಂದೇಶ್ (27) ಎನ್ನಲಾಗಿದೆ. ಸಂದೇಶ್ ಖಾಸಗಿ ಸಂಸ್ಥೆಯೊಂದರಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಬಜ್ಪೆಯಿಂದ ಮಂಗಳೂರು ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದ ಸಂದೇಶ್ ಅವರಿಗೆ ಕರಂಬಾರು ಮಸೀದಿಯ ಬಳಿ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ಸಂದೇಶ್‌ ಅವರ ಮೇಲೆ ಹಿಂದಿನಿಂದ ಬಂದ ಗೂಡ್ಸ್ ಲಾರಿ ಹರಿದಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!