Sunday, May 5, 2024
spot_imgspot_img
spot_imgspot_img

ಮಂಗಳೂರು: ಕುಟುಂಬ ಸಮೇತ ಕಟೀಲಿಗೆ ಶಿಲ್ಪಾ ಶೆಟ್ಟಿ ಭೇಟಿ; ಹೆಣ್ಣು ಮಗುವಿಗಾಗಿ ಹರಕೆ ಹೊತ್ತಿದ್ದ ಕುಂದ್ರಾ ದಂಪತಿ

- Advertisement -G L Acharya panikkar
- Advertisement -
vtv vitla

ಮಂಗಳೂರು: ಖ್ಯಾತ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಶನಿವಾರ ಸಂಜೆ ಭೇಟಿ ನೀಡಿದರು.

ದೇವಳದ ವತಿಯಿಂದ ಶಿಲ್ಪಾ ಶೆಟ್ಟಿ ಕುಟುಂಬವನ್ನು ಬರಮಾಡಿಕೊಂಡು ಗೌರವಿಸಲಾಯಿತು. ದೇವರ ಶೇಷ ವಸ್ತ್ರ ಪ್ರಸಾದ ನೀಡಲಾಯಿತು. ಹೆಣ್ಣು ಮಗುವಿಗಾಗಿ ಹರಕೆ ಹೊತ್ತಿದ್ದ ಶಿಲ್ಪಾ ಶೆಟ್ಟಿ ಹೆಣ್ಣು ಮಗು ಜನಿಸಿದರೆ ಕಟೀಲು ದುರ್ಗಾ ಪರಮೇಶ್ವರಿಗೆ ಪಟ್ಟೆ ಸೀರೆಯನ್ನು ಕಾಣಿಕೆ ರೂಪದಲ್ಲಿ ನೀಡೋದಾಗಿ ಹರಕೆ ಹೊತ್ತಿದ್ದರಂತೆ. ಅದೇ ರೀತಿ ದೇವಳಕ್ಕೆ ಬಂದು ತಮ್ಮ ಹರಕೆಯನ್ನು ತೀರಿಸಿದ್ದಾರೆ.

ನಂತರ ಯಕ್ಷಗಾನವನ್ನು ವೀಕ್ಷಿಸಿದ ಶಿಲ್ಪಾ ಶೆಟ್ಟಿ ಕಲೆಯ ಬಗ್ಗೆ ಬಹಳ ಖುಷಿ ಪಟ್ಟರು,ಶಿಲ್ಪಾ ಅವರ ಜೊತೆ ಪತಿ ರಾಜ್ ಕುಂದ್ರ , ತಂಗಿ ಶಮಿತಾ ಶೆಟ್ಟಿ ಮತ್ತು ಕುಟುಂಬ ವರ್ಗದವರು ಉಪಸ್ಥಿತರಿದ್ದರು.

ದೇವಳದ ಮುಕ್ತೇಸರ ವಾಸುದೇವ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ , ಹರಿನಾರಾಯಣ ದಾಸ ಆಸ್ರಣ್ಣ ಈ ಸಂದರ್ಭ ಉಪಸ್ಥಿತರಿದ್ದರು.

- Advertisement -

Related news

error: Content is protected !!