- Advertisement -
- Advertisement -
ಮಂಗಳೂರು: ಯೆಯ್ಯಾಡಿ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದೆ.
ಕೈಗಾರಿಕಾ ವಲಯದಲ್ಲಿರುವ ಏಸ್ ಫುಡ್ ಪ್ರೈವೆಟ್ ಸಂಸ್ಥೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ದಟ್ಟವಾಗಿ ಹರಡಿದ್ದು, ಸ್ಥಳದಲ್ಲಿ ಹಲವಾರು ಜನ ಸೇರಿದ್ದರು.
ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಅಗ್ನಿಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿ ನಂದಿಸುವ ಕೆಲಸದಲ್ಲಿ ತೊಡಗಿದ್ದಾರೆ. ಅವಘಡದಿಂದ ಒಟ್ಟು ಎಷ್ಟು ಹಾನಿ ಸಂಭವಿಸಿದೆ ಎಂಬುದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
- Advertisement -