- Advertisement -
- Advertisement -
ಮಂಗಳೂರು: ನಗರದ ಅತ್ತಾವರ ಸಮೀಪದ ನಂದಿಗುಡ್ಡೆಯ ಮಾರ್ನಮಿಕಟ್ಟೆಯ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬಂಧಿತ ವ್ಯಕ್ತಿ ಹುಬ್ಬಳ್ಳಿ ಮೂಲದವನಾದ, ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ದೇವದಾಸ್ ದೇಸಾಯಿ (62)ಎಂದು ಗುರುತಿಸಲಾಗಿದೆ..
ಆತ ದೇವಸ್ಥಾನ, ದೈವಸ್ಥಾನ, ಮಸೀದಿ ಸೇರಿದಂತೆ 18 ಕಡೆಗಳಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತ ಲೇಖನ ಹಾಕಿದ್ದ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಮಂಗಳೂರು: ಕಾಂಡೋಮ್ ಹಾಕಿ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಕಿಡಿಗೇಡಿಗಳು..!
ಘಟನೆಗೆ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿಯನ್ನು ಪರಿಶೀಲಿಸಿದ್ದು, ಇದರ ಆಧಾರದ ಮೇಲೆ ಶಂಕಿತ ಓರ್ವನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
- Advertisement -