- Advertisement -
- Advertisement -
ಮಂಗಳೂರು: ಪತಿಯೇ ಪತ್ನಿ ಹಾಗು ತನ್ನ ಪುತ್ರನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ಸೇರಾವೋ ರಸ್ತೆ ಕಂಪೌಂಡ್ ನಲ್ಲಿ ನಡೆದಿದೆ. ಆರೋಪಿ ನಗರದ ಸೇರಾವೋ ರಸ್ತೆ ಕಂಪೌಂಡ್ ನಿವಾಸಿ ರಮೇಶ್ ಬಂಗೇರಾ (54) ಎನ್ನಲಾಗಿದೆ. ಹಲ್ಲೆಗೊಳಗಾದವರು ಬೇಬಿ ಕುಂದರ್ ಮತ್ತು ಅಶ್ವಿನ್ ಎಂದು ತಿಳಿದುಬಂದಿದೆ.
ರಮೇಶ್ ಬಂಗೇರ ಅವರು ತನ್ನ ಬೇಬಿಕುಂದರ್ ಮತ್ತು ಮಗ ಅಶ್ವಿನ್ ಜತೆಯಲ್ಲಿ ವಾಸಿಸುತ್ತಿದ್ದಾರೆ. ಶನಿವಾರದಂದು ರಾತ್ರಿ ವೇಳೆ ಗಂಡ ತನ್ನ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಈ ಜಾಗ ನನ್ನದ್ದು, ನೀವಿಬ್ಬರೂ ಇಲ್ಲಿಂದ ಹೋಗಿ ಎಂದು ಹೇಳಿ ಚೂರಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ.
ಈ ಸಂದರ್ಭ ಬೇಬಿ ಕುಂದರ್ ಅವರ ಎಡಕೈ ಮಣಿಗಂಟಿಗೆ ಗಾಯವಾಗಿದೆ. ಇದನ್ನು ನೋಡಿದ ಮಗ ಅಶ್ವಿನ್ ತಡೆಯಲು ಬಂದಾಗ ಆತನ ಬಲ ಕೈ ಗೂ ಗಾಯವಾಗಿದೆ. ಕಿರುಚಾಟ ಕೇಳಿದ ಸ್ಥಳಿಯರು ಮನೆಯ ಬಳಿಗೆ ಧಾವಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಘಟನೆಯ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -