Saturday, June 28, 2025
spot_imgspot_img
spot_imgspot_img

ಮಂಗಳೂರು: ಗುರುಪುರದಲ್ಲಿ ನದಿಗೆ ಹಾರಿದ ವ್ಯಕ್ತಿ; ವ್ಯಾಪಕ ಶೋಧ

- Advertisement -
- Advertisement -

ಮಂಗಳೂರು: ವ್ಯಕ್ತಿಯೊರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುಪುರದಲ್ಲಿ ನಡೆದಿದ್ದು, ಪತ್ತೆಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿರುವ ಅರುಣ್ ಅ. 27 ರ ಗುರುವಾರ ರಾತ್ರಿ 7 ಗಂಟೆಯ ಸುಮಾರಿಗೆ ಗುರುಪುರ ಸೇತುವೆಯ ಬಳಿ ಬಂದು ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿದ್ದರು.

ನಾಲ್ಕು ವರ್ಷದ ಹಿಂದೆ ವಿವಾಹವಾಗಿರುವ ಇವರು, ಓರ್ವ ಮಗಳನ್ನು ಹೊಂದಿದ್ದಾರೆ. ಅರುಣ್ ನದಿಗೆ ಹಾರುವುದನ್ನು ಕಂಡ ಸ್ಥಳೀಯರು ತಕ್ಷಣ ಪೋಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕೆ ಧಾವಿಸಿದ ಬಜಪೆ ಪೊಲೀಸರು ಅರುಣ್ ಗಾಗಿ ಹುಡುಕಾಟದ ಕಾರ್ಯಾಚರಣೆ ನಡೆಸಿದ್ದರು ಆದರೆ ರಾತ್ರಿಯಾದುದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು .ಶುಕ್ರವಾರ ಬೆಳಿಗ್ಗಿನಿಂದ ಮತ್ತೆ ಕಾರ್ಯಾಚರಣೆ ಮುಂದುವರಿದಿದೆ.

- Advertisement -

Related news

error: Content is protected !!