Thursday, March 28, 2024
spot_imgspot_img
spot_imgspot_img

ಮಂಗಳೂರು: ಗೋಹತ್ಯೆ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ

- Advertisement -G L Acharya panikkar
- Advertisement -

ಮಂಗಳೂರು: ಅರ್ಕುಳ ಕೋಟೆಯಲ್ಲಿ ಅಕ್ರಮವಾಗಿ ಗೋ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿ ಬಾತೀಶ್‌ನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು (ಎಸಿ) ನೋಟಿಸ್ ನೀಡಿದ್ದಾರೆ.

ಆರೋಪಿ ಬಾತೀಶ್ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಜುಲೈ 3 ರಂದು ಗ್ರಾಮಾಂತರ ಪೊಲೀಸರು ದಾಳಿ ನಡೆಸಿ 95 ಕೆಜಿ ದನದ ಮಾಂಸ, ತೂಕದ ತಕ್ಕಡಿ, ಕತ್ತಿಗಳು, ಮರದ ದಿಮ್ಮಿ ಇತ್ಯಾದಿಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಎ ಕೆ ಖಾಲಿದ್ ಎಂಬುವರ ಮನೆಯ ಪಕ್ಕದ ಶೆಡ್‌ನಲ್ಲಿ ಈ ಅಕ್ರಮ ನಡೆಸುತ್ತಿದ್ದು, ಪೊಲೀಸರು ದಾಳಿ ನಡೆಸಿದಾಗ ಆತ ಸ್ಥಳದಿಂದ ಪರಾರಿಯಾಗಿದ್ದಾನೆ.

ಇನ್ನು ಆರೋಪಿಯು ಯಾವುದೇ ಅನುಮತಿಯಿಲ್ಲದೆ ಜಾನುವಾರುಗಳನ್ನು ಕೊಂದಿರುವ ಕಾರಣ, ಕೃತ್ಯ ಎಸಗಿದ ಸ್ಥಳವನ್ನು ಜಪ್ತಿ ಮಾಡುವ ಬಗ್ಗೆ ವಿಚಾರಣೆಯನ್ನು ಜುಲೈ 12 ರಂದು ಮಧ್ಯಾಹ್ನ 3 ಗಂಟೆಗೆ ಎಸಿ ನ್ಯಾಯಾಲಯದ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಎಸಿ ಸಲ್ಲಿಸಿದ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಆರೋಪಿಯು ತನ್ನ ಅಧಿಕೃತ ಪ್ರತಿನಿಧಿ ಅಥವಾ ವಕೀಲರ ಮೂಲಕ ಆ ದಿನದಂದು ತನ್ನ ವಾದಗಳನ್ನು ಅಥವಾ ಪ್ರತಿವಾದಗಳನ್ನು ಮಂಡಿಸಲು ಅನುಮತಿಸಲಾಗಿದ್ದು, ಇದನ್ನು ಅನುಸರಿಸದಿದ್ದಲ್ಲಿ, ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಗೋ ಹತ್ಯೆ ಪ್ರಕರಣದ ಬೆನ್ನುಬಿದ್ದ ಭರತ್ ಶೆಟ್ಟಿ.!

- Advertisement -

Related news

error: Content is protected !!