- Advertisement -
- Advertisement -
ಮಂಗಳೂರು: ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ವಲಯದ ಕುಪ್ಪೆಪದವು ಸಮೀಪ ಬುಧವಾರ ರಾತ್ರಿ ನಡೆದಿದೆ.
ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು 9ಮತ್ತು 10 ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆಗೆ ಶರಣಾದವರು.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗದಲ್ಲಿರುವ ತನ್ನ ಸೇವಾ ಸಿಂಧು ಕಚೇರಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಬುಧವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ಇವರನ್ನು ಹುಡುಕಾಟ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಸೇವಾ ಸಿಂಧು ಕೇಂದ್ರವನ್ನು ನಡೆಸುತ್ತಿದ್ದ ಇವರು ಇನ್ಶೂರೆನ್ಸ್ ಏಜೇಂಟರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ವ್ಯಾವಹಾರಿಕ ಸಮಸ್ಯೆಗಳು ಆತ್ಮಹತ್ಯೆಗೆ ಕಾರಣವೆನ್ನಲಾಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯಿಂದ ಬಹಿರಂಗವಾಗಬೇಕಿದೆ.
- Advertisement -