Wednesday, April 24, 2024
spot_imgspot_img
spot_imgspot_img

ಮಂಗಳೂರು: ಚಲಿಸುತ್ತಿದ್ದ ಆಟೋದಲ್ಲಿ ಚಾಲಕನಿಗೆ ಹೃದಯಾಘಾತ.!

- Advertisement -G L Acharya panikkar
- Advertisement -

vtv vitla
vtv vitla
vtv vitla

ಮಂಗಳೂರು: ಆಟೋ ಚಲಿಸುತ್ತಿರುವ ವೇಳೆಯೇ ಹೃದಯಾಘಾತಕ್ಕೆ ಒಳಗಾಗಿ ಆಟೋ ಚಾಲಕ ಸಾವನಪ್ಪಿರುವ ಘಟನೆ ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತರನ್ನ ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಎಂದು ಗುರುತಿಸಲಾಗಿದೆ. ಸವಾರಿಯನ್ನು ಕೂರಿಸಿಕೊಂಡು ಬಾಡಿಗೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಆಟೋ ರಿಕ್ಷಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಪ್ಪಿನಮೊಗರು ತಲುಪಿದಾಗ ಚಾಲಕ ಹನೀಫ್ ರಿಗೆ ಕಣ್ಣು ಮಂಜಾದಂತಾಗಿದ್ದು, ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ಸಾರ್ವಜನಿಕರು ಹನೀಫ್ ರನ್ನು ಆರೈಕೆ ಮಾಡಿದ್ದರು. ಬಳಿಕ ಸುಧಾರಿಸಿಕೊಂಡ ಅವರು ರಿಕ್ಷಾ ಚಲಾಯಿಸಿಕೊಂಡು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದರೂ ನೇತ್ರಾವತಿ ಸೇತುವೆ ತಲುಪಿದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

vtv vitla

- Advertisement -

Related news

error: Content is protected !!