Monday, May 6, 2024
spot_imgspot_img
spot_imgspot_img

ಮಂಗಳೂರು: ಚೂರಿ ಇರಿತ ಪ್ರಕರಣ- ನಾಲ್ವರು ವಶಕ್ಕೆ, ಕಾರಿನಲ್ಲಿ ಮಹಿಳೆಯ ಚಪ್ಪಲಿ ಪತ್ತೆ.!

- Advertisement -G L Acharya panikkar
- Advertisement -

vtv vitla
vtv vitla

ಮಂಗಳೂರು: ನಗರ ಹೊರ ವಲಯದ ನೀರುಮಾರ್ಗ ಸಮೀಪ ಪಡು ಎಂಬಲ್ಲಿ ಡಿಸೆಂಬರ್ 10ರ ಶುಕ್ರವಾರ ರಾತ್ರಿ ಅಬ್ದುಲ್ ರಝಾಕ್ (38) ಎಂಬಾತ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಶನಿವಾರ ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳೂರು: ಅಡ್ಯಾರುಪದವು ಬಳಿ ಯುವಕನ ಮೇಲೆ ತಲವಾರು ದಾಳಿ; ಆಟೋ ಚಾಲಕ ರಝಾಕ್ ಗಂಭೀರ

ಪಡು ಬಳಿ ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಶುಕ್ರವಾರ ರಾತ್ರಿ ಇರಿತಕ್ಕೊಳಗಾಗಿದ್ದರು. ರಾತ್ರಿ 9 ಗಂಟೆಗೆ ಕಾರಿನಲ್ಲಿ ಬಂದ 5 ರಿಂದ 6 ಮಂದಿ ಅಪರಿಚಿತ ವ್ಯಕ್ತಿಗಳ ತಂಡ ಕೃತ್ಯ ಎಸಗಿತ್ತು ಎಂದು ದೂರಲಾಗಿತ್ತು. ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 307 ಐಪಿಸಿ ಪ್ರಕರಣ ದಾಖಲಾಗಿದೆ.

ಗಾಯಾಳು ಅಬ್ದುಲ್ ರಝಾಕ್ ಆಸ್ಪತ್ರೆಯಲ್ಲಿದ್ದು ಹಲ್ಲೆಗೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಗಾಯಾಳು ಜೀವಾಪಾಯದಿಂದ ಪಾರಾಗಿದ್ದಾರೆ. ಆರೋಪಿಗಳ ಬಗ್ಗೆ ನಮಗೆ ಅಗತ್ಯ ಮಾಹಿತಿ ಸಿಕ್ಕಿದೆ. ಇದಲ್ಲದೆ ರಿಟ್ಜ್ ಕಾರಿನಲ್ಲಿ ಮಹಿಳೆಯರು ಧರಿಸುವ ಒಂದು ಜತೆ ಚಪ್ಪಲಿ ಹಾಗೂ ಮಹಿಳೆಗೆ ಸಂಬಂಧಿಸಿದ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ” ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

vtv vitla

- Advertisement -

Related news

error: Content is protected !!