- Advertisement -
- Advertisement -
ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್ ನಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (45) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದು ತನಿಖೆ ತೀವ್ರಗೊಳಿಸಿದ್ದರೆ. ಮಹಿಳೆಯ ಕುರಿತಾಗಿ ಉಂಟಾದ ವೈಮನಸ್ಸು ಹತ್ಯೆಗೆ ಕಾರಣ ಎನ್ನುವುದು ಪೊಲೀಸ್ ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಜಲೀಲ್ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿಯಾಗಿದ್ದು, ಕಾಟಿಪಳ್ಳದಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದರು. ಅಂಗಡಿಗೆ ಬರುವ ಮಹಿಳೆಯರ ಜತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದರು ಎನ್ನುವ ಆರೋಪವಿದ್ದು, ಇದೇ ಜಲೀಲ್ ಕೊಲೆಗೆ ಕಾರಣವಾಯಿತೇ ಎಂಬ ಅನುಮಾನವನ್ನು ತನಿಖಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ.
ಮಹಿಳೆಯೊಬ್ಬರ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದಾಗ ಈ ಹಿಂದೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದ ಘಟನೆಯೂ ನಡೆದಿತ್ತು ಎನ್ನಲಾಗುತ್ತಿದೆ. ಈ ವೇಳೆ ಸ್ಥಳೀಯರು ಇನ್ನು ಮುಂದೆ ಈ ರೀತಿ ವರ್ತಿಸದಂತೆ ಎಚ್ಚರಿಕೆ ನೀಡಿದ್ದರು. ಪುನಾವರ್ತನೆಯಾದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಸ್ಥಳೀಯ ಯುವಕರು ಒಂದು ತಿಂಗಳ ಹಿಂದೆ ಮತ್ತೆ ಎಚ್ಚರಿಕೆ ನೀಡಿದ್ದರು. ಫ್ಯಾನ್ಸಿ ಅಂಗಡಿಯನ್ನು ತೆರವು ಮಾಡುವಂತೆ ಸೂಚಿಸಿದ್ದರು ಎನ್ನಲಾಗಿದೆ.
- Advertisement -