Tuesday, May 21, 2024
spot_imgspot_img
spot_imgspot_img

ಮಂಗಳೂರು: ತಂದೆ ಮಗ ಸೇರಿ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ; ಹಲ್ಲೆಗೈದವರು ಅಂದರ್‍

- Advertisement -G L Acharya panikkar
- Advertisement -

ಮಂಗಳೂರು: ಭಿನ್ನಾಭಿಪ್ರಾಯ ಹಾಗೂ ಹಳೆ ದ್ವೇಷದ ಕಾರಣದಿಂದ ವ್ಯಕ್ತಿಯೊಬ್ಬರಿಗೆ ತಂದೆ – ಮಗ ಸೇರಿ ಹಲ್ಲೆ ನಡೆಸಿರುವ ಘಟನೆ ಆ. 16 ರ ಸಂಜೆ ನಗರದ ಬೋಳೂರಿನ ಜಾರಂದಾಯ ದೇವಸ್ಥಾನ ಬಳಿ ನಡೆದಿದೆ.

ಬೋಳೂರಿನ ನಿವಾಸಿ ನವೀನ್ ಸಾಲ್ಯಾನ್ ಎಂಬವರಿಗೆ ಸ್ಥಳೀಯರಾದ ದೇವದಾಸ್ ಬೋಳೂರು (61) ಮತ್ತವನ ಮಗ ಸಾಯಿ ಕಿರಣ್ (21) ಎಂಬವರು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ನವೀನ್ ಸಾಲ್ಯಾನ್ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ‌. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದೇವದಾಸ್ ಬೋಳೂರು ಮತ್ತವರ ಪುತ್ರ ಸಾಯಿ ಕಿರಣ್‌ ನನ್ನು ಪೊಲೀಸರು ಬಂಧಿಸಿದ್ದಾರೆ‌.

ಈ ಘಟನೆಗೆ ಬೋಳೂರು ಮೊಗವೀರ ಮಹಾಸಭಾ ಸಂಘದ ಆಡಳಿತದ ಭಿನ್ನಾಭಿಪ್ರಾಯ ಹಾಗೂ ಹಳೆ ದ್ವೇಷವೇ ಕಾರಣ ಹಳೆ ದ್ವೇಷದ ಪರಿಣಾಮದಿಂದ ಈ ಘಟನೆ ನಡೆದಿದ್ದು ಹಾಗೂ ಠಾಣೆಯಲ್ಲಿ ಈ ಹಿಂದೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!