Saturday, April 27, 2024
spot_imgspot_img
spot_imgspot_img

ಮಂಗಳೂರು : ತಾಯಿಗೆ ಹಲ್ಲೆ ಮಾಡಿ ಮೂಳೆ ಮುರಿದ ಪಾಪಿ ಮಗ; ದೂರು ದಾಖಲು

- Advertisement -G L Acharya panikkar
- Advertisement -

ಮಂಗಳೂರು: ಮಗನೋರ್ವ ಹೆತ್ತ ತಾಯಿಗೆ ಅವ್ಯಾಚ ಶಬ್ದಗಳಿಂದ ಬೈದು ದೂಡಿ ಹಾಕಿ ತುಳಿದು ತೊಡೆಯ ಮೂಳೆ ಮುರಿದು ಹಾಕಿದ ಘಟನೆ ಬತ್ತೇರಿ ಗಾರ್ಡನ್‌ನ ಫೆಲಿಕ್ಸ್‌ ಕಂಪೌಂಡ್‌ನ‌ಲ್ಲಿ ತಡರಾತ್ರಿ ಸಂಭವಿಸಿದೆ.

ಆರೋಪಿ ಪುತ್ರ ರೋಹಿತ್‌ ವಿರುದ್ಧ ಗಾಯಾಳು ಆಗಿರುವ ಶಾಂತಾ ರೈ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶಾಂತಾ ರೈ ಅವರು ಮೈದುನ ನವೀನ್‌ ರೈ ಮತ್ತು ಅತ್ತೆ ಶಾಂಭವಿ ಶೆಟ್ಟಿ ಅವರು ಫೆಲಿಕ್ಸ್‌ ಕಂಪೌಂಡ್‌ನ‌ಲ್ಲಿ ವಾಸವಿದ್ದು ಬುಧವಾರ ತಡರಾತ್ರಿ ಸುಮಾರು 1.30ರ ವೇಳೆಗೆ ಆರೋಪಿ ಪುತ್ರ ರೋಹಿತ್‌ ಕಬ್ಬಿಣದ ಪಂಚ್‌ ತರಹದ ವಸ್ತುವನ್ನು ಹಿಡಿದು ತಿರುಗಿಸುತ್ತಾ ಮನೆಯ ಒಳಗೆ ಬಂದು ಶಾಂತಾ ಅವರ ಅತ್ತೆ ಶಾಂಭವಿ ಶೆಟ್ಟಿಯವರ ಕುತ್ತಿಗೆ ಹಿಡಿಯಲು ಮುಂದಾಗಿದ್ದಾನೆ.

ಆಗ ನವೀನ್‌ ಆತನನ್ನು ತಡೆದಿದ್ದಾರೆ. ಆಗ ಅವರಿಗೂ ಕೊಲೆ ಬೆದರಿಕೆಯೊಡ್ಡಿ, ಆತನ ಕೈಯಲ್ಲಿದ್ದ ಕಬ್ಬಿಣದ ವಸ್ತುವಿನಿಂದ ಎದೆಗೆ ಗುದ್ದಿ ಎಳೆದಾಡಿ ದೂಡಿ ಹಾಕಿದ್ದಾನೆ. ತಾಯಿ ಶಾಂತಾ ಅವರು ತಡೆಯಲು ಬಂದಾಗ ಅವರಿಗೆ, ಅವಾಚ್ಯ ಶಬ್ದಗಳಿಂದ ಬೈಯ್ದು ದೂಡಿ ಹಾಕಿದ್ದಾನೆ. “ತಾಯಿಯದೂ ನಿನ್ನನು ಬಿಡುವುದಿಲ್ಲ” ಎಂದು ನೆಲಕ್ಕೆ ಬಿದ್ದ ಆಕೆಯ ಬಲಕಾಲಿನ ತೊಡೆಗೆ ಕಾಲಿನಿಂದ ತುಳಿದಿದ್ದಾನೆ. ಇದರ ಪರಿಣಾಮ ಮೂಳೆ ಮುರಿತವಾಗಿದ್ದು, ಬಳಿಕ ಜೀವ ಬೆದರಿಕೆ ಹಾಕಿ ಅಲ್ಲಿಂದ ಹೊರಟು ಹೋಗಿದ್ದಾನೆ. ಶಾಂತಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಗರೋಹಿತನ ನಡತೆ ಸರಿ ಇಲ್ಲದೇ ಇದ್ದುದರಿಂದ ಹಲವು ಬಾರಿ ಸರಿಯಾಗಿ ಕೆಲಸಕ್ಕೆ ಹೋಗಿ ಹಣ ಸಂಪಾದಿಸುವಂತೆ ಬುದ್ದಿವಾದ ಹೇಳಿದ್ದಕ್ಕೆ ಕೋಪಗೊಂಡು ಹಲ್ಲೆ ನಡೆಸಿ, ಕೊಲೆ ಬೆದರಿಕೆಯೊಡ್ಡಿದ್ದಾನೆ ಎಂದು ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!