- Advertisement -
- Advertisement -
ಮಂಗಳೂರು: ಕರಾವಳಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ ಹೆಚ್ಚಾಗಿದ್ದು, ಧಾರ್ಮಿಕ ಕೇಂದ್ರಗಳಿಗೆ ಹಾನಿಮಾಡಿ ಜನರ ಭಾವನೆಗಳನ್ನು ಕೆರಳಿಸುವ ಕೃತ್ಯಗಳು ಹೆಚ್ಚಾಗಿದೆ. ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿದೆ. ಮಂಗಳೂರಿನ ಕೂಳೂರು ವಿ.ಆರ್.ಎಲ್ ಬಳಿಯ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ದ್ವಂಸ ಮಾಡಿದ ಘಟನೆ ನಡೆದಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅನೇಕ ಸಮಯದಿಂದ ಇಂತಹ ದುಷ್ಕೃತ್ಯ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿದ್ದು, ಈ ಕೃತ್ಯದ ಹಿಂದಿನ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಬಂಧಿಸಲು ಹಿಂದೂ ಸಂಘಟನೆಗಳು ಆಗ್ರಹಿಸಿವೆ.
- Advertisement -