Sunday, April 28, 2024
spot_imgspot_img
spot_imgspot_img

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಹಿಂಬದಿ ಸವಾರರಿಗಿಲ್ಲ ಅವಕಾಶ; ADGP

- Advertisement -G L Acharya panikkar
- Advertisement -

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ ಪೊಲೀಸ್ ಇಲಾಖೆ ಜಾರಿಗೆ ತರಲಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿರಿಗೆ ಅವಕಾಶವಿಲ್ಲ ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ.

ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಕೆಲವು ಬಾರಿ ಹಿಂಬದಿ ಸವಾರರು ಸಮಸ್ಯೆ ಉಂಟು ಮಾಡ್ತಾರೆ. ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಗೆ ತರಲಾಗಿತ್ತು. ಆಗ ಎಲ್ಲಾ ಪುರಷ ಹಿಂಬದಿ ಸವಾರರಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸಲು ಅವಕಾಶ ನಿರಾಕರಿಸಲಾಗಿತ್ತು ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು,ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

- Advertisement -

Related news

error: Content is protected !!