- Advertisement -
- Advertisement -
ಬೈಕಂಪಾಡಿ: ಇತ್ತೀಚೆಗೆ ದುಷ್ಕರ್ಮಿಗಳು ದೇವಾಲಯಗಳಿಗೆ ಕನ್ನಹಾಕುವುದಲ್ಲದೆ, ಹಾನಿ ಮಾಡುವ ಘಟನೆಗಳು ಹೆಚ್ಚಾಗಿದೆ. ಬೈಕಂಪಾಡಿಯ ಕರ್ಕೇರ ಮೂಲ ಸ್ಥಾನ ಜರಂದಾಯ ದೈವಸ್ಥಾನ ಮತ್ತು ನಾಗನ ಬ್ರಹ್ಮ ಪೀಠವನ್ನು ದುಷ್ಕರ್ಮಿಗಳು ಹಾನಿಮಾಡಿರುವ ಘಟನೆ ನಡೆದಿದೆ.
ದೈವಸ್ಥಾದ ಗೇಟುಗಳನ್ನು ಒಡೆದು ಹಾಕಿದ್ದಾರೆ, ಒಂದು ನಾಗನ ಮೂರ್ತಿಯನ್ನು ಭಗ್ನ ಮಾಡಿದ್ದರೆ. ನಂದಿಯ ಕಲ್ಲಿನ ವಿಗ್ರಹಕ್ಕೂ ಹಾನಿಮಾಡಿದ್ದಾರೆ. ಕಪಾಟು ಒಡೆದು ಚೆಲ್ಲಾ ಪಿಲ್ಲಿ ಮಾಡಲಾಗಿದೆ. ಈ ಘಟನೆ ಶನಿವಾರ ರಾತ್ರಿ ನಡೆದಿದ್ದು, ಇಂದು ಮುಂಜಾನೆ ದೈವಸ್ಥಾನಕ್ಕೆ ಭೇಟಿ ನೀಡಿದವರ ಗಮನಕ್ಕೆ ಬಂದಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Advertisement -