Wednesday, April 24, 2024
spot_imgspot_img
spot_imgspot_img

 ಮಂಗಳೂರು: ದ್ವಿಚಕ್ರ ವಾಹನದಲ್ಲಿ ಡಬ್ಬಲ್ ರೈಡ್ ಗೆ ನಿರ್ಬಂಧ ಹಿಂಪಡೆದ ಕಮಿಷನರ್.!

- Advertisement -G L Acharya panikkar
- Advertisement -

ಮಂಗಳೂರು: ಈಗಾಗಲೇ ಎಡಿಜಿಪಿ ಅಲೋಕ್ ಕುಮಾರ್ ದ.ಕ ಜಿಲ್ಲೆಗೆ ಅನ್ವಯವಾಗುವಂತೆ ಸೂಚಿಸಿದ್ದ ದ್ವಿಚಕ್ರ ವಾಹನದ ಹೊಸ ನಿಯಮವನ್ನು ತಿದ್ದುಪಡಿಗೊಳಿಸಿ ಮಂಗಳೂರು ನಗರ ಪೊಲಿಸ್ ಆಯುಕ್ತ ಎನ್ ಶಶಿಕುಮಾರ್ ಮತ್ತೊಮ್ಮೆ ಹೊಸ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಅಸಮಾಧಾನಕ್ಕೆ ಮಣಿದ ಜಿಲ್ಲಾಡಳಿತ ಬೈಕ್ ಹಿಂಬದಿ ಪುರುಷ ಸವಾರನ ನಿರ್ಬಂಧ ಸಡಿಲಿಕೆ ಮಾಡಿದ್ದು ಆ ನಿಯಮವನ್ನು ಹಿಂತೆಗೆದುಕೊಳ್ಳಲಾಗಿದೆ ಎನ್ನುವ ಅಧಿಕೃತ ಮಾಹಿತಿಯನ್ನು ಈಗಾಗಲೇ ನೀಡಿದ್ದಾರೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಹಿಂಬದಿ ಸವಾರರಿಗಿಲ್ಲ ಅವಕಾಶ

ಜಿಲ್ಲೆಯಲ್ಲಿ ರಾತ್ರಿ ವಾಹನ ಸಂಚಾರ ನಿರ್ಬಂಧವನ್ನು ಪರಿಷ್ಕರಿಸಿದ್ದು, ರಾತ್ರಿ 9.00 ರಿಂದ ಬೆಳಗ್ಗೆ 6:00 ವರೆಗೆ ಮಾರ್ಪಾಡುಗೊಳಿಸಲಾಗಿದೆ. ಇನ್ನು ಸರಣಿ ಹತ್ಯೆಗಳಿಂದ ಕಂಗೆಟ್ಟಿದ್ದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಸರಣಿ ಹತ್ಯೆಗಳು ನಡೆದ ಪ್ರದೇಶಗಳಿಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!