Sunday, May 19, 2024
spot_imgspot_img
spot_imgspot_img

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತುಗಳನ್ನು ಸಾಗಾಟ; ವ್ಯಕ್ತಿಯ ಬಂಧನ

- Advertisement -G L Acharya panikkar
- Advertisement -

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಕರಂಬಾರಿನ ಗೋಪಾಲಕೃಷ್ಣ ಯಾನೆ ಗೋಪಾಲ ಎಂದು ಗುರುತಿಸಲಾಗಿದೆ.

ಬಜ್ಪೆ ಪೊಲೀಸರು ಕರಂಬಾರು ಬಳಿ ತಪಾಸಣೆ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬ ತಲೆಗೆ ಹೆಲ್ಮೆಟ್ ಧರಿಸಿಕೊಳ್ಳದೆ ಸ್ಕೂಟರ್ ಚಲಾಯಿಸಿಕೊಂಡು ಬರುತ್ತಿದ್ದು, ಇದನ್ನು ಗಮನಿಸಿದ ಪೊಲೀಸರು ಸ್ಕೂಟರ್ ನಿಲ್ಲಿಸುವಂತೆ ಸೂಚನೆ ನೀಡಿದರೂ, ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದ. ಆತನನ್ನು ಹಿಡಿದು ವಿಚಾರಿಸಿದಾಗ ಸ್ಕೂಟರ್ ನ ಡಿಕ್ಕಿಯಲ್ಲಿ ದೊಡ್ಡ ಪ್ರಮಾಣದ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್ ನ್ನು ಇರಿಸಿಕೊಂಡು ಮಾರಾಟ ಮಾಡಲು ಹೋಗುತ್ತಿರುವುದಾಗಿ ತಿಳಿಸಿದ್ದು, ಆರೋಪಿಯ ವಶದಿಂದ ಸುಮಾರು 50 ಸಾವಿರ ಮೌಲ್ಯದ ಸ್ಕೂಟರ್ ಮತ್ತು ಸುಮಾರು 1.5 ಗ್ರಾಂ ತೂಕವಿರುವ 7,500ರೂ. ಮೌಲ್ಯದ ಮಾದಕ ವಸ್ತು ಎಂಡಿಎಂಎ ಡ್ರಗ್ಸ್ ಮತ್ತು ಚಿಕ್ಕ ತೂಕ ಮಾಪಕವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ಗೋಪಾಲಕೃಷ್ಣ ವಿರುದ್ದ ಈ ಹಿಂದೆ ಮಂಗಳೂರು ಗ್ರಾ.ಕಾವೂರು ಪುತ್ತೂರು ಠಾಣೆಗಳಲ್ಲಿ ನಾಲ್ಕು ಕೊಲೆ, ಒಂದು ಗಾಂಜಾ ಮಾರಾಟ ಮತ್ತು ಕಳವಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.

vtv vitla
vtv vitla
- Advertisement -

Related news

error: Content is protected !!