Friday, June 19, 2026
spot_imgspot_img
spot_imgspot_img

ಮಂಗಳೂರು: ನಾಪತ್ತೆಯಾಗಿದ್ದ ಬಾಲಕನ ಶವ ನದಿಯಲ್ಲಿ ಪತ್ತೆ

- Advertisement -
- Advertisement -

ಮಂಗಳೂರು: ಭಾನುವಾರದಂದು ನಾಪತ್ತೆಯಾಗಿದ್ದ ಖಾಸಗಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನ ಶವ ಹೊಗೈಬಜಾರ್ ಬಳಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಮೃತ ಬಾಲಕನನ್ನು ದೃಶ್ಯಾಂತ್ (16) ಎಂದು ಗುರುತಿಸಲಾಗಿದೆ. ಮಂಗಳೂರಿನ ಮಹಾಕಾಳಿ ಪಡ್ಪು ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟಕ್ಕೆ ದೃಶ್ಯಾಂತ್ ಹೋಗಿ ಭಾನುವಾರ ಮಧ್ಯಾಹ್ನ 3.30ರವರೆಗೆ ಕ್ರಿಕೆಟ್ ಪಂದ್ಯಕ್ಕೆ ಕಾಮೆಂಟರಿ ನಿರ್ವಹಿಸುತ್ತಿದ್ದ. ಪಂದ್ಯ ಮುಗಿಯುತ್ತಿದ್ದಂತೆ ಆತನ ಸ್ನೇಹಿತರು ಪಂದ್ಯ ಮುಗಿಸಿ ತೆರಳಿದ್ದರು. ಆದರೆ ದೃಶ್ಯಾಂತ್ ಮಾತ್ರ ಮನೆ ತಲುಪಿಲ್ಲರಲಿಲ್ಲ. ಆತನ ಸ್ನೇಹಿತರು, ಸಂಬಂಧಿಕರು ಮತ್ತು ಇತರ ಪರಿಚಿತ ವ್ಯಕ್ತಿಗಳೊಂದಿಗೆ ಆತನ ಬಗ್ಗೆ ವಿಚಾರಿಸಲಾಯಿತಾದರೂ ಮಾಹಿತಿ ಲಭ್ಯವಾಗಿರಲಿಲ್ಲ.

ಪುತ್ರ ನಾಪತ್ತೆಯಾಗಿರುವ ಬಗ್ಗೆ ತಾಯಿ ಆಶಾ ಅವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಭಾನುವಾರ ಎಫ್‌ಐಆರ್ ದಾಖಲಿಸಿದ್ದರು.

ಆದರೆ ಈ ನಡುವೆ ಸೋಮವಾರ ಸಂಜೆ ಹೊಯ್ಗೆಬಜಾರ್‌ನ ನೇತ್ರಾವತಿ ನದಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಪೊಲೀಸ್ ಸಿಬ್ಬಂದಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!