Sunday, June 29, 2025
spot_imgspot_img
spot_imgspot_img

ಮಂಗಳೂರು: ಪಾರ್ಕಿಂಗ್‌ ವಿಚಾರದಲ್ಲಿ ಆಟೋ ಚಾಲಕನಿಗೆ ಥಳಿತ; ದೂರು ದಾಖಲು

- Advertisement -
- Advertisement -
vtv vitla

ಮಂಗಳೂರು: ಆಟೋ ಚಾಲಕನೊಬ್ಬನಿಗೆ ಉಳಿದ ಆಟೋ ಚಾಲಕರು ಥಳಿಸಿ ಗಾಯಗೊಳಿಸಿದ ಘಟನೆ ಪಣಂಬೂರು ಬೀಚ್‌ನಲ್ಲಿ ನಡೆದಿದೆ. ಗಾಯಗೊಂಡ ಚಾಲಕನನ್ನು ಹೇಮಚಂದ್ರ ಎಂದು ಗುರುತಿಸಲಾಗಿದೆ.

ನಿನ್ನೆ ಸಂಜೆ ವೇಳೆ ಬಾಡಿಗೆ ನಿಮಿತ್ತ ಹೇಮಚಂದ್ರ ಅವರು ಪಣಂಬೂರು ಪಾರ್ಕ್‌‌ಗೆ ಹೋಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ 10 ಮಂದಿ ಆಟೋ ಚಾಲಕರ ತಂಡ “ನೀನು ಇಲ್ಲ ಬಾಡಿಗೆ ಮಾಡಬಾರದು. ಇದು ನಮ್ಮ ಏರಿಯಾ, ಇಲ್ಲಿ ನಾವು ಮಾತ್ರ ಬಾಡಿಗೆ ಮಾಡುವುದು” ಎಂದು ಬೆದರಿಸಿದ್ದಾರೆ. ಬಳಿಕ ಕಣ್ಣು , ಕೈಕಾಲು ಸಹಿತ ಮರ್ಮಾಂಗಕ್ಕೆ ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರೊಬ್ಬರು ಪೆಟ್ಟು ತಿಂದ ಆಟೋ ಚಾಲಕನಿ‌ಗೆ ಬೈದು ಕಳುಹಿಸಿದ್ದಾರೆ ಎಂದು ಅವರು ದೂರಿದ್ದಾರೆ. ಗಂಭೀರ ಗಾಯಗೊಂಡಿರುವ ಆಟೋ ಚಾಲಕ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಘಟನೆ ಬಗ್ಗೆ ಆಟೋ ಚಾಲಕ ಪಣಂಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!