ಮಂಗಳೂರು : ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಈಗ ಪುನಃ ಭುಗಿಲೆದ್ದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ರಥಬೀದಿಯ ಡಾ.ಪಿ.ದಯಾನಂದ-ಸತೀಶ್ ಪೈ ಸರಕಾರಿ ಪ್ರಥಮ ದರರ್ಜೆ ಕಾಲೇಕಲಜಿನಲ್ಲಿ ಸಂಘರ್ಷಕ್ಕೆ ಕಾರಣವಾಗಿದೆ.
ನಿನ್ನೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯುತ್ತಿದ್ದ ಆರೇಳು ವಿದ್ಯಾರ್ಥಿನಿಯರನ್ನು ಬಲವಾಂತವಾಗಿ ಪರೀಕ್ಷೆ ಹಾಲ್ ನಿಂದ ಹೊರಗೆ ಹಾಕಿದ ಘಟನೆ ನಡೆದಿತ್ತು. ಆದರೆ ಇಂದು ಆ ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ಶಾಲು ಹಾಕಿಕೊಂಡು ಪರೀಕ್ಷೆಗೆ ಬಂದಿದ್ದರು. ಇದಕ್ಕೆ ಕೆಲವು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದರು. ಇದರ ಹಿನ್ನಲೆಯಲ್ಲಿ ಪ್ರಾಂಶುಪಾಲರು ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಗೆ ಹಾಜರಾಗಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಇದರ ನಡುವೆ ವಿರೋಧ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಹಾಗೂ ಹಿಜಾಬ್ ಧರಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರ ನಡುವೆ ಕಾಲೇಜಿನ ಮುಂಭಾಗದಲ್ಲಿ ವಾದ ನಡೆದು ನಂತರ ಸಂಘರ್ಷಕ್ಕೆ ಕಾರಣವಾಗಿದೆ. ಘಟನ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಾಂಶುಪಾಲರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.