Wednesday, May 8, 2024
spot_imgspot_img
spot_imgspot_img

ಮಂಗಳೂರು: ಪೂಜೆಗೆ ಇಟ್ಟ ಕರಿಮಣಿ ಸರ ಎಗರಿಸಿದ ಜ್ಯೋತಿಷಿ; ದೂರು ದಾಖಲು..!

- Advertisement -G L Acharya panikkar
- Advertisement -
vtv vitla
vtv vitla
vtv vitla

ಮಂಗಳೂರು: ಪೂಜೆಯ ವೇಳೆ ಕಲಶಕ್ಕೆ ಇಟ್ಟ ಕರಿಮಣಿ ಸರ ವಾಪಾಸ್ ನೀಡದೆ ಜ್ಯೋತಿಷಿಯೋರ್ವ ಮಹಿಳೆಗೆ ವಂಚಿಸಿರುವ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

vtv vitla

ಮನೆಯಲ್ಲಿ ಕಷ್ಟವಿದೆ ಎಂಬ ಹಿನ್ನಲೆ ಮಹಿಳೆಯೋರ್ವರು ಅ.13 ರಂದು ಕುಂಜತ್ ಬೈಲಿನಲ್ಲಿರುವ ಜ್ಯೋತಿಷಿ ವಿನೋದ್ ಪೂಜಾರಿ ಬಳಿ ಹೋಗಿದ್ದರು. ವಿನೋದ್, ನಿಮಗೆ ತುಂಬಾ ದೋಷವಿದೆ. ಆ ದೋಷವನ್ನು ಕಳೆಯುವುದಕ್ಕಾಗಿ ಪೂಜೆ ಮಾಡಿಸಿಕೊಡುತ್ತೇನೆ.

vtv vitla
vtv vitla

ಪೂಜೆಯ ಸಮಯ ಕಲಶಕ್ಕೆ ಇಡಲು ಚಿನ್ನದ ಆಭರಣ ತರಬೇಕು ಎಂದಿದ್ದ.ಅದರಂತೆಯೇ ಮಹಿಳೆ ಐದೂವರೆ ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ಪೂಜೆಗೆ ನೀಡಿದ್ದರು. ವಿನೋದ್ ಆ ಸರವನ್ನಿಟ್ಟು 15 ದಿನ ಪೂಜೆ ಮಾಡಿ ವಾಪಾಸ್ ನೀಡುವುದಾಗಿ ತಿಳಿಸಿದ್ದ.

ಆದರೆ ಅನಂತರವೂ ನೀಡದೆ ತಲೆಮರೆಸಿಕೊಂಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!