Sunday, June 29, 2025
spot_imgspot_img
spot_imgspot_img

ಮಂಗಳೂರು: ಪೊಲೀಸರ ಹೆಸರು ಹೇಳಿ ಹಣ ಸುಲಿಗೆ – ಆರೋಪಿ ಅಬ್ದುಲ್ ಖಾದರ್ ರಿಝ್ವಾನ್ ಅಂದರ್.!

- Advertisement -
- Advertisement -

ಮಂಗಳೂರು : ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿನ ಆರೋಪಿಯ ಹೆಸರನ್ನು ಪ್ರಕರಣದಿಂದ ತೆಗೆಯುತ್ತೇನೆ ಎಂದು ಹೇಳಿ ರೂ 2.95 ಲಕ್ಷ ಹಣವನ್ನು ಸುಲಿಗೆ ಮಾಡಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಅಬ್ದುಲ್ ಖಾದರ್ ರಿಝ್ವಾನ್ (28) ಎಂದು ಗುರುತಿಸಲಾಗಿದೆ. 2021 ನೇ ದಶಂಬರ್ ತಿಂಗಳಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿದ್ದು, ಈ ಪ್ರಕರಣದಲ್ಲಿನ ಆರೋಪಿಯು ದಸ್ತಗಿರಿಯಾಗದೇ ಇದ್ದು, ಈತನ ದಸ್ತಗಿರಿಗಾಗಿ ಹುಡುಕಾಡುತ್ತಿದ್ದರು. ಈ ಸಮಯದಲ್ಲಿ ಆತನನ್ನು ಸಂಪರ್ಕಿಸಿದ ಇಬ್ಬರು ಪೊಲೀಸರಿಗೆ ಹಣ ನೀಡಿ ಅವರ ಜೊತೆ ಮಾತುಕತೆ ನಡೆಸಿ ಕೇಸಿನಿಂದ ಹೆಸರನ್ನು ತೆಗೆಯುತ್ತೇವೆ ಎಂದು ಹೇಳಿಕೊಂಡು ಆತನಿಂದ 3 ಲಕ್ಷ ಹಣವನ್ನು ಡಿಮ್ಯಾಂಡ್ ಮಾಡಿ ಹಂತ ಹಂತವಾಗಿ ಒಟ್ಟು 2,95,000 ಹಣವನ್ನು ಪಡೆದುಕೊಂಡಿದ್ದರು.

ನಂತರ ಆತನಿಂದ ಹಣ ಪಡೆದುಕೊಂಡ ವ್ಯಕ್ತಿಗಳಿಂದ ಹಣವನ್ನು ವಾಪಾಸ್ಸು ನೀಡುವಂತೆ ತಿಳಿಸಿದಾಗ ಹಣದ ವಿಚಾರದಲ್ಲಿ ಕರೆ ಮಾಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ನಂತರ ರೂ. 30,000 ಹಣವನ್ನು ನೀಡುವಂತೆ ಬೇಡಿಕೆಯಿಟ್ಟಿದ್ದು, ಇದರಿಂದ ಆರೋಪಿಗಳ ವಿರುದ್ಧ ಹಣವನ್ನು ಕಳೆದುಕೊಂಡ ವ್ಯಕ್ತಿಯು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಂತೆ ಪ್ರಕರಣ ದಾಖಲಾಗಿದೆ.

ಅಬ್ದುಲ್ ಖಾದರ್ ರಿಝ್ವಾನ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಸಮಯ ಇನ್ನೋರ್ವ ಆರೋಪಿಯು ಭಾಗಿಯಾಗಿದ್ದು, ಆತನ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!