Friday, April 19, 2024
spot_imgspot_img
spot_imgspot_img

ಮಂಗಳೂರು: ಪೊಲೀಸ್ ಜೀಪಿಗೆ ಕಲ್ಲೆಸೆತ- ಆರೋಪಿ ಮಹಮ್ಮದ್ ಹಫೀಜ್ ಪೊಲೀಸ್ ವಶಕ್ಕೆ!

- Advertisement -G L Acharya panikkar
- Advertisement -

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ಬಳಿ ವ್ಯಕ್ತಿಯೋರ್ವ ಪೊಲೀಸ್ ಜೀಪ್ ಗೆ ಕಲ್ಲೆಸೆದ ಘಟನೆ ನಡೆದಿದ್ದು, ಪೊಲೀಸರೊಂದಿಗೆ ಸ್ಥಳೀಯರು ಸೇರಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಡಿ ನಿವಾಸಿ ಮಹಮ್ಮದ್ ಹಫೀಝ್ ಎಂಬಾತನೇ ಪೊಲೀಸರ ವಶದಲ್ಲಿರುವ ಆರೋಪಿಯಾಗಿದ್ದು, ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದು ಅಲ್ಲೇ ಇರುವ ವಾಣಿಜ್ಯ ಸಂಕೀರ್ಣ ದ ಮೇಲಿನಿಂದ ಕಲ್ಲೆಸೆದಿದ್ದು ಈ ಸಂದರ್ಭದಲ್ಲಿ‌ಪೊಲೀಸರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕೊರಗಜ್ಜನ ಕೋಲ ನಡೆಯುತ್ತಿದ್ದ ಸ್ಥಳದ ಸಮೀಪದಲ್ಲೇ ಕೃತ್ಯ ನಡೆದಿರುವುದು ಕೋಮು ಸಾಮರಸ್ಯ ಕದಡಲು ಯತ್ನಿಸಿದ್ದ ಎನ್ನಲಾಗಿದೆ. ಭಕ್ತಾಧಿಗಳು ಸಂಯಮದಿಂದ ವರ್ತಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!