Thursday, March 28, 2024
spot_imgspot_img
spot_imgspot_img

ಮಂಗಳೂರು: ಫಾಝಿಲ್‌ ಕೊಲೆ ಪ್ರಕರಣದ ಆರೋಪಿ ಹರ್ಷಿತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

- Advertisement -G L Acharya panikkar
- Advertisement -

ಮಂಗಳೂರು: ಬರ್ಬರವಾಗಿ ಹತ್ಯೆಗೀಡಾದ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್‌ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ಹರ್ಷಿತ್‌ಗೆ ಜೆಎಂಎಫ್‌ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಫಾಝಿಲ್ ಕೊಲೆ ನಂತರ ತಪ್ಪಿಸಿಕೊಳ್ಳಲು ಕಾರು ನೀಡಿ, ಆಶ್ರಯ ಕೂಡ ನೀಡಿ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ಸುರತ್ಕಲ್ ಪೊಲೀಸರು ಆರೋಪಿ ಹರ್ಷಿತ್‌ನನ್ನು ಆಗಸ್ಟ್ 17ರಂದು ಬಂಧಿಸಿದ್ದರು. ಪೊಲೀಸರು ಗುರುವಾರ ಆರೋಪಿ ಹರ್ಷಿತನನ್ನು ಎರಡನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಸುರತ್ಕಲ್ ಮಾರುಕಟ್ಟೆಯ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಮತ್ತು ಕೃತ್ಯ ಎಸಗಲು ಕಾರು ನೀಡಿದ್ದ ಓರ್ವನನ್ನು ಬಂಧಿಸಿದ್ದರು. ಒಟ್ಟು ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

- Advertisement -

Related news

error: Content is protected !!