- Advertisement -
- Advertisement -
ಮಂಗಳೂರು: ಎನ್ಐಎ ದಾಳಿಯಲ್ಲಿ ಬಂಧಿತರಾಗಿರುವ 5 ಮಂದಿ ಪಿಎಫ್ಐ ಮುಖಂಡರನ್ನು 24 ಗಂಟೆಯೊಳಗೆ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಎಚ್ಚರಿಸಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್ಐಎ ದಾಳಿ ರಾಜಕೀಯ ಪ್ರೇರಿತವಾಗಿದೆ. ಎಸ್ ಡಿಪಿಐ ರಾಜಕೀಯವಾಗಿ ವೇಗವಾಗಿ ಬೆಳೆಯುತ್ತಿದೆ ಎಂಬ ನೆಲೆಯಲ್ಲಿ ಬಿಜೆಪಿ ಬಗ್ಗೆ ಸಾರ್ವಜನಿಕವಾಗಿ ಇರುವ ಕೆಟ್ಟ ಅಭಿಪ್ರಾಯದ ಬಗ್ಗೆ ಚರ್ಚೆ ನಡೆಯುತ್ತಿದೆ. ಇದನ್ನು ಮರೆಮಾಚಲು, ಬಿಜೆಪಿ ಕಾರ್ಯಕರ್ತರನ್ನು ಖುಷಿಪಡಿಸಲು ಈ ದಾಳಿ ನಡೆಸಿದ್ದಾರೆ ಎಂದು ಹೇಳಿದರು.

- Advertisement -