Sunday, June 29, 2025
spot_imgspot_img
spot_imgspot_img

ಮಂಗಳೂರು: ಬಸ್‌ ಡಿಕ್ಕಿಯಾಗಿ ಪಾದಚಾರಿ ದುರಂತ ಅಂತ್ಯ

- Advertisement -
- Advertisement -
vtv vitla

ಮಂಗಳೂರು: ಬಸ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರಿನ ಸ್ಟೇಟ್‌ಬ್ಯಾಂಕ್‌ ಮೀನು ಮಾರ್ಕೆಟ್ ಎದುರು ನಿನ್ನೆ ನಡೆದಿದೆ. ಮೃತರನ್ನು ಬಸವರಾಜ್ (45) ಎನ್ನಲಾಗಿದೆ.

ಇವರು ಬೆಳಿಗ್ಗೆ 7.20ಕ್ಕೆ ಮೀನು ಮಾರ್ಕೆಟ್ ಎದುರು ರಸ್ತೆ ದಾಟುತ್ತಿದ್ದಾಗ ರಾವ್ ಆ್ಯಂಡ್ ರಾವ್ ಸರ್ಕಲ್ ಕಡೆಗೆ ಹೋಗುತ್ತಿದ್ದ ಬಸ್ ಢಿಕ್ಕಿ ಹೊಡೆಯಿತು. ಅಪಘಾತದಲ್ಲಿ ಬಸವರಾಜ್ ಅವರು ಸುಮಾರು 15 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ತೊಡೆ ಮತ್ತು ಸೊಂಟಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಘಟನೆಗೆ ಬಸ್ ಚಾಲಕ ಅಶ್ತಫ್ ವುಲ್ಲಾ ನಿರ್ಲಕ್ಷ್ಯತನ ಮತ್ತು ಅಪಾಯಕಾರಿಯಾಗಿ ಬಸ್ ಚಾಲನೆ ಮಾಡಿರುವುದೇ ಅಪಘಾತ ಸಂಭವಿಸಲು ಕಾರಣ ಎನ್ನುವ ಆರೋಪ ವ್ಯಕ್ತವಾಗಿದೆ. ಮಂಗಳೂರು ಪಶ್ವಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!