- Advertisement -
- Advertisement -
ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯ ಪರಾರಿ ಸಮೀಪದ ರಾಜ್ ಟೈಲ್ಸ್ ಹೆಂಚಿನ ಕಾರ್ಖಾನೆಯಲ್ಲಿ ಸಮೀಪದ ಮೋರಿಯಲ್ಲಿ 8 ರ ಹರೆಯದ ಬಾಲಕಿಯ ಮೃತದೇಹ ಪತ್ತೆಯಾಗಿರುವ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದು ಉತ್ತರ ಭಾರತದ 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಭಾನುವಾರ ಕಾರ್ಖಾನೆಗೆ ರಜೆ ಇದ್ದುದರಿಂದ ಕಾರ್ಮಿಕರು ಅಲ್ಲೇ ವಾಸವಾಗಿದ್ದರು. ಆ ವೇಳೆ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ವೆಸಗಿರುವ ಕೊಲೆಗೈದಿರುವವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಮಂಗಳೂರು: ಅಪ್ರಾಪ್ತೆಯ ಮೃತದೇಹ ಚರಂಡಿಯಲ್ಲಿ ಪತ್ತೆ; ಅತ್ಯಾಚಾರ ಶಂಕೆ!
ಕಾರ್ಖಾನೆಯನ್ನು ಕೇರಳ ಮೂಲದ ವ್ಯಕ್ತಿಗಳು ನಡೆಸುತ್ತಿದ್ದು ಇಲ್ಲಿ ಸುಮಾರು 25 ಮಂದಿ ದುಡಿಯುತ್ತಿದ್ದಾರೆ. ಬಾಲಕಿ ನಾಪತ್ತೆಯಾಗಿರುವುದು ಸಂಜೆ 4 ಗಂಟೆ ವೇಳೆಗೆ ಮನೆಮಂದಿಗೆ ತಿಳಿದುಬಂದಿತ್ತು. 6 ಗಂಟೆ ವೇಳೆಗೆ ಮೃತದೇಹ ಪತ್ತೆಯಾಗಿದೆ. ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮರಣೋತ್ತರ ವರದಿಗಾಗಿ ಕಾಯುತ್ತಿದ್ದಾರೆ.
- Advertisement -