- Advertisement -
- Advertisement -
ಮಂಗಳೂರು: ಮಂಗಳೂರು ನಗರದ ಅತ್ತಾವರ ಸಮೀಪದ 6 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿದ ಆರೋಪದಡಿ ಆರೋಪಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅತ್ತಾವರ ಬಾಬುಗುಡ್ಡೆ ನಿವಾಸಿ ಶಾಲಾ ವಾಹನದ ಚಾಲಕ ಕೃಷ್ಣಪ್ಪ ಎನ್ನಲಾಗಿದೆ.
ಆರೋಪಿಯು 6ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯನ್ನು ಅತ್ಯಾಚಾರ ಎಸಗಿರುವುದಾಗಿ ಬಾಲಕಿಯ ಹೆತ್ತವರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆಯ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನವಾಗಿದೆ ಎಂದು ತಿಳಿದು ಬಂದಿದೆ.
- Advertisement -