Thursday, May 16, 2024
spot_imgspot_img
spot_imgspot_img

ಮಂಗಳೂರು: ಬಿಎಂಡಬ್ಲ್ಯು ಕಾರು ಅಪಘಾತಕ್ಕೀಡಾಗಿ ಮೃತಪಟ್ಟ ಮಹಿಳೆಯ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

- Advertisement -G L Acharya panikkar
- Advertisement -

ಮಂಗಳೂರು: ಏ.9ರಂದು ಬಿಎಂಡಬ್ಲ್ಯು ಕಾರು ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಮೆದುಳು ನಿಷ್ಕ್ರಿಯ ಆಗಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಇದರಿಂದ ಮಹಿಳೆಯ ಕುಟುಂಬದವರು ಅಂಗಾಂಗ ದಾನ ಮಾಡುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ನಗರದ ಕರಂಗಲ್ಪಾಡಿ ನಿವಾಸಿ ಪ್ರೀತಿ ಮನೋಜ್ (47) ಅವರು ಏ.9ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯು ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ರಸ್ತೆಯ ವಿಭಜಕವನ್ನು ದಾಟಿ, ಮತ್ತೊಂದು ಬದಿಯಲ್ಲಿ ಹೋಗುತ್ತಿದ್ದ ಸ್ಕೂಟಿ ಹಾಗೂ ಕಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಎರಡು ಕಾರುಗಳ ಮಧ್ಯೆ ಸಿಲುಕಿದ ಸ್ಕೂಟರ್ ಸವಾರಿ ಮಾಡುತ್ತಿದ್ದ ಪ್ರೀತಿ ಮನೋಜ್ ಗಂಭೀರವಾಗಿ ಗಾಯಗೊಂಡಿದ್ದರು.

ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಮೆದುಳು ನಿಷ್ಕ್ರಿಯಗೊಂಡಿರುವುದನ್ನು ಶನಿವಾರ ವೈದ್ಯರು ಖಚಿತಪಡಿದ್ದಾರೆ. ಬಿಎಂಡಬ್ಲ್ಯು ಕಾರು ಚಾಲಕ ಮಣ್ಣಗುಡ್ಡೆಯ ಉದ್ಯಮಿ ಶ್ರವಣ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!