- Advertisement -
- Advertisement -


ಮಂಗಳೂರು: ಕಂಕನಾಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು ಕಂಕನಾಡಿ ಬಳಿ ಸಾರ್ವಜನಿಕವಾಗಿ ಉದ್ದೇಶ ಪೂರ್ವಕವಾಗಿ ತೊಂದರೆ ನೀಡಲು ನಡೆಸಿದ ನಮಾಜಿನ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಜ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ, ನಿಲ್ಲಿಸಲಾಗುವುದು ಎಂದು ಈ ಮೂಲಕ ಎಚ್ಚರಿಗೆ ನೀಡುತ್ತಿದ್ದೇವೆ. “ ಎಂದು ಪೋಸ್ಟ್ ಹಾಕಿದ್ದು, ಇದರ ವಿರುದ್ಧ ಮಂಗಳೂರು ನಗರ ಸೆನ್ ಕ್ರೈಂ ಪೋಲೀಸ್ ಠಾಣೆಯಲ್ಲಿ ಕಲಂ 153(A) 506 IPc ಅಡಿ ಪ್ರಕರಣ ದಾಖಲಾಗಿದೆ.
- Advertisement -